25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ.

ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ ಆರೋಪಿ ಉಜಿರೆಯ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ರವರು ಅವರ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ, ಅವರ ಮನೆಯಲ್ಲಿಯೇ ಆಶ್ರಯ ನೀಡಿ ಇಂದು ಬೆಳಿಗ್ಗೆ 8-30 ಗಂಟೆಗೆ ಮಹಿಳೆಯನ್ನು ಆರೋಪಿಯು ಧರ್ಮಸ್ಥಳ ದಲ್ಲಿರುವ ಅವರ ಸಂಸ್ಥೆಗೆ ಕೆಲಸಕ್ಕೆ ಬಿಡುವುದಾಗಿ ತಿಳಿಸಿ ರೆಂಜಾಳ ಎಂಬಲ್ಲಿನ ತನ್ನ ಮನೆಯಿಂದ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಕಾರು ಚಲಾಯಿಸುತ್ತಾ ಧರ್ಮಸ್ಥಳ ಮಾರ್ಗವಾಗಿ ಚಲಿಸದೇ ಕಿಡ್ನಾಪ್‌ ಮಾಡಿ ಕಕ್ಕಿಂಜೆ ಮಾರ್ಗವಾಗಿ ಕಾರನ್ನು ಚಲಾಯಿಸಿಕೊಂಡು ಹೋದಾಗ ಮಹಿಳೆಗೆ ಸಂಶಯ ಬಂದು ಈ ಬಗ್ಗೆ ಪ್ರಶ್ನಿಸಿದಾಗ ನಿನ್ನ ಗಂಡನಿಗೆ ಹೇಗೂ ಕೆಲಸ ಕೊಟ್ಟಿದ್ದಿನಲ್ಲಾ ಎಂದು ಹೇಳುತ್ತಾ ಲೈಂಗಿಕ ದೌರ್ಜನ್ಯ ಮತ್ತು ಅವಮಾನಕರವಾಗಿ ವರ್ತಿಸಿದಾಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು ಕೆಲವರು ಅಲ್ಲಿಗೆ ಬರುವುದನ್ನು ಕಂಡು ಸ್ವಲ್ಪ ಮುಂದೆ ಹೋಗಿ ಕಾರಿನಿಂದ ಇಳಿಸಿ ಆರೋಪಿಯು ಹೊರಟು ಹೋಗಿರುತ್ತಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ತನಿಖೆಯ ನಂತರವೇ ತಿಳಿದುಬರಬೇಕಿದೆ.

Related posts

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya
error: Content is protected !!