31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ.

ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ ಆರೋಪಿ ಉಜಿರೆಯ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ರವರು ಅವರ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ, ಅವರ ಮನೆಯಲ್ಲಿಯೇ ಆಶ್ರಯ ನೀಡಿ ಇಂದು ಬೆಳಿಗ್ಗೆ 8-30 ಗಂಟೆಗೆ ಮಹಿಳೆಯನ್ನು ಆರೋಪಿಯು ಧರ್ಮಸ್ಥಳ ದಲ್ಲಿರುವ ಅವರ ಸಂಸ್ಥೆಗೆ ಕೆಲಸಕ್ಕೆ ಬಿಡುವುದಾಗಿ ತಿಳಿಸಿ ರೆಂಜಾಳ ಎಂಬಲ್ಲಿನ ತನ್ನ ಮನೆಯಿಂದ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಕಾರು ಚಲಾಯಿಸುತ್ತಾ ಧರ್ಮಸ್ಥಳ ಮಾರ್ಗವಾಗಿ ಚಲಿಸದೇ ಕಿಡ್ನಾಪ್‌ ಮಾಡಿ ಕಕ್ಕಿಂಜೆ ಮಾರ್ಗವಾಗಿ ಕಾರನ್ನು ಚಲಾಯಿಸಿಕೊಂಡು ಹೋದಾಗ ಮಹಿಳೆಗೆ ಸಂಶಯ ಬಂದು ಈ ಬಗ್ಗೆ ಪ್ರಶ್ನಿಸಿದಾಗ ನಿನ್ನ ಗಂಡನಿಗೆ ಹೇಗೂ ಕೆಲಸ ಕೊಟ್ಟಿದ್ದಿನಲ್ಲಾ ಎಂದು ಹೇಳುತ್ತಾ ಲೈಂಗಿಕ ದೌರ್ಜನ್ಯ ಮತ್ತು ಅವಮಾನಕರವಾಗಿ ವರ್ತಿಸಿದಾಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು ಕೆಲವರು ಅಲ್ಲಿಗೆ ಬರುವುದನ್ನು ಕಂಡು ಸ್ವಲ್ಪ ಮುಂದೆ ಹೋಗಿ ಕಾರಿನಿಂದ ಇಳಿಸಿ ಆರೋಪಿಯು ಹೊರಟು ಹೋಗಿರುತ್ತಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ತನಿಖೆಯ ನಂತರವೇ ತಿಳಿದುಬರಬೇಕಿದೆ.

Related posts

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya
error: Content is protected !!