22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ.

ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ ಆರೋಪಿ ಉಜಿರೆಯ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ರವರು ಅವರ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ, ಅವರ ಮನೆಯಲ್ಲಿಯೇ ಆಶ್ರಯ ನೀಡಿ ಇಂದು ಬೆಳಿಗ್ಗೆ 8-30 ಗಂಟೆಗೆ ಮಹಿಳೆಯನ್ನು ಆರೋಪಿಯು ಧರ್ಮಸ್ಥಳ ದಲ್ಲಿರುವ ಅವರ ಸಂಸ್ಥೆಗೆ ಕೆಲಸಕ್ಕೆ ಬಿಡುವುದಾಗಿ ತಿಳಿಸಿ ರೆಂಜಾಳ ಎಂಬಲ್ಲಿನ ತನ್ನ ಮನೆಯಿಂದ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಕಾರು ಚಲಾಯಿಸುತ್ತಾ ಧರ್ಮಸ್ಥಳ ಮಾರ್ಗವಾಗಿ ಚಲಿಸದೇ ಕಿಡ್ನಾಪ್‌ ಮಾಡಿ ಕಕ್ಕಿಂಜೆ ಮಾರ್ಗವಾಗಿ ಕಾರನ್ನು ಚಲಾಯಿಸಿಕೊಂಡು ಹೋದಾಗ ಮಹಿಳೆಗೆ ಸಂಶಯ ಬಂದು ಈ ಬಗ್ಗೆ ಪ್ರಶ್ನಿಸಿದಾಗ ನಿನ್ನ ಗಂಡನಿಗೆ ಹೇಗೂ ಕೆಲಸ ಕೊಟ್ಟಿದ್ದಿನಲ್ಲಾ ಎಂದು ಹೇಳುತ್ತಾ ಲೈಂಗಿಕ ದೌರ್ಜನ್ಯ ಮತ್ತು ಅವಮಾನಕರವಾಗಿ ವರ್ತಿಸಿದಾಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು ಕೆಲವರು ಅಲ್ಲಿಗೆ ಬರುವುದನ್ನು ಕಂಡು ಸ್ವಲ್ಪ ಮುಂದೆ ಹೋಗಿ ಕಾರಿನಿಂದ ಇಳಿಸಿ ಆರೋಪಿಯು ಹೊರಟು ಹೋಗಿರುತ್ತಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ತನಿಖೆಯ ನಂತರವೇ ತಿಳಿದುಬರಬೇಕಿದೆ.

Related posts

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya
error: Content is protected !!