23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ.

ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ ಆರೋಪಿ ಉಜಿರೆಯ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ರವರು ಅವರ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ, ಅವರ ಮನೆಯಲ್ಲಿಯೇ ಆಶ್ರಯ ನೀಡಿ ಇಂದು ಬೆಳಿಗ್ಗೆ 8-30 ಗಂಟೆಗೆ ಮಹಿಳೆಯನ್ನು ಆರೋಪಿಯು ಧರ್ಮಸ್ಥಳ ದಲ್ಲಿರುವ ಅವರ ಸಂಸ್ಥೆಗೆ ಕೆಲಸಕ್ಕೆ ಬಿಡುವುದಾಗಿ ತಿಳಿಸಿ ರೆಂಜಾಳ ಎಂಬಲ್ಲಿನ ತನ್ನ ಮನೆಯಿಂದ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಕಾರು ಚಲಾಯಿಸುತ್ತಾ ಧರ್ಮಸ್ಥಳ ಮಾರ್ಗವಾಗಿ ಚಲಿಸದೇ ಕಿಡ್ನಾಪ್‌ ಮಾಡಿ ಕಕ್ಕಿಂಜೆ ಮಾರ್ಗವಾಗಿ ಕಾರನ್ನು ಚಲಾಯಿಸಿಕೊಂಡು ಹೋದಾಗ ಮಹಿಳೆಗೆ ಸಂಶಯ ಬಂದು ಈ ಬಗ್ಗೆ ಪ್ರಶ್ನಿಸಿದಾಗ ನಿನ್ನ ಗಂಡನಿಗೆ ಹೇಗೂ ಕೆಲಸ ಕೊಟ್ಟಿದ್ದಿನಲ್ಲಾ ಎಂದು ಹೇಳುತ್ತಾ ಲೈಂಗಿಕ ದೌರ್ಜನ್ಯ ಮತ್ತು ಅವಮಾನಕರವಾಗಿ ವರ್ತಿಸಿದಾಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು ಕೆಲವರು ಅಲ್ಲಿಗೆ ಬರುವುದನ್ನು ಕಂಡು ಸ್ವಲ್ಪ ಮುಂದೆ ಹೋಗಿ ಕಾರಿನಿಂದ ಇಳಿಸಿ ಆರೋಪಿಯು ಹೊರಟು ಹೋಗಿರುತ್ತಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ತನಿಖೆಯ ನಂತರವೇ ತಿಳಿದುಬರಬೇಕಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya
error: Content is protected !!