23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ.

ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ ಆರೋಪಿ ಉಜಿರೆಯ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ರವರು ಅವರ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ, ಅವರ ಮನೆಯಲ್ಲಿಯೇ ಆಶ್ರಯ ನೀಡಿ ಇಂದು ಬೆಳಿಗ್ಗೆ 8-30 ಗಂಟೆಗೆ ಮಹಿಳೆಯನ್ನು ಆರೋಪಿಯು ಧರ್ಮಸ್ಥಳ ದಲ್ಲಿರುವ ಅವರ ಸಂಸ್ಥೆಗೆ ಕೆಲಸಕ್ಕೆ ಬಿಡುವುದಾಗಿ ತಿಳಿಸಿ ರೆಂಜಾಳ ಎಂಬಲ್ಲಿನ ತನ್ನ ಮನೆಯಿಂದ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಕಾರು ಚಲಾಯಿಸುತ್ತಾ ಧರ್ಮಸ್ಥಳ ಮಾರ್ಗವಾಗಿ ಚಲಿಸದೇ ಕಿಡ್ನಾಪ್‌ ಮಾಡಿ ಕಕ್ಕಿಂಜೆ ಮಾರ್ಗವಾಗಿ ಕಾರನ್ನು ಚಲಾಯಿಸಿಕೊಂಡು ಹೋದಾಗ ಮಹಿಳೆಗೆ ಸಂಶಯ ಬಂದು ಈ ಬಗ್ಗೆ ಪ್ರಶ್ನಿಸಿದಾಗ ನಿನ್ನ ಗಂಡನಿಗೆ ಹೇಗೂ ಕೆಲಸ ಕೊಟ್ಟಿದ್ದಿನಲ್ಲಾ ಎಂದು ಹೇಳುತ್ತಾ ಲೈಂಗಿಕ ದೌರ್ಜನ್ಯ ಮತ್ತು ಅವಮಾನಕರವಾಗಿ ವರ್ತಿಸಿದಾಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು ಕೆಲವರು ಅಲ್ಲಿಗೆ ಬರುವುದನ್ನು ಕಂಡು ಸ್ವಲ್ಪ ಮುಂದೆ ಹೋಗಿ ಕಾರಿನಿಂದ ಇಳಿಸಿ ಆರೋಪಿಯು ಹೊರಟು ಹೋಗಿರುತ್ತಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ತನಿಖೆಯ ನಂತರವೇ ತಿಳಿದುಬರಬೇಕಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!