25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿಯಲ್ಲಿ ಸಂಕ್ರಾಂತಿ ಪೂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೇ 15 ರಂದು ಕ್ಷೇತ್ರದಲ್ಲಿ ಜರುಗಿತು.


ಇದೇ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷ ನೀಡಲಾಗುವ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸುಮಾರು 3 ಸಾವಿರಕ್ಕೂ ಮಿಕ್ಕಿ ಅರ್ಜಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ, ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ ಅಜಿಲ ಹಾಗೂ ಇತರರು ಅರ್ಜಿಗಳನ್ನು ವಿತರಿಸಿದರು.

ಸಂಕ್ರಾಂತಿ ಪೂಜೆ ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya
error: Content is protected !!