25.5 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಜಿರೆ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಳೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ. ಪಾದೆಕಲ್ಲು ವಿಷ್ಣು ಭಟ್   ಅವರು ಆಯ್ಕೆಯಾಗಿದ್ದಾರೆ.

ಕಲಾರಂಗದ ವಾರ್ಷಿಕ  ತಾಳಮದ್ದಲೆ ಸಪ್ತಾಹ ಮೇ 21 ರಿಂದ 27ರ ವರೆಗೆ ನಡೆಯಲಿದ್ದು, ಮೇ 27 ಶನಿವಾರ ಸಂಜೆ 5.00 ಗಂಟೆಗೆ ಶಿರ್ವದ ಮಹಿಳಾ ಸೌಧದಲ್ಲಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya
error: Content is protected !!