July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಸೆನ್ನೆಲ್‌ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.ಆದರೆ ಅವರ ವಾರಸುದಾರರ ಕುರಿತು ಈ ಪರಿಸರದ ಯಾರಿಗೂ ಮಾಹಿತಿ ಇಲ್ಲ. ಶುಕ್ರವಾರ ಸಂಜೆ ಇವರ ಮೃತದೇಹ ದೂರವಾಣಿ ವಿನಿಮಯ ಕೇಂದ್ರದ ಬಳಿ ಪತ್ತೆಯಾಗಿದೆ. ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ಸ್ವಯಂಸೇವಕರಾದ ರವೀಂದ್ರ, ಸುಧೀರ್‌ ಹಾಗೂ ರಾಘವೇಂದ್ರ ಇವರು ತತ್‌ಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

6.65 ಲಕ್ಷ ರೂ. ಹಣ ಪತ್ತೆ
ಪೊಲೀಸರ ಸಮ್ಮುಖದಲ್ಲಿ ಕುಟುಂಬದವರ ಪತ್ತೆಗಾಗಿ ವ್ಯಕ್ತಿಯ ಮೃತದೇಹದ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಪತ್ತೆಯಾಗಿದೆ. ಇದನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ. ವ್ಯಕ್ತಿಯು ಕೂಲಿ ಕೆಲಸ ಮಾಡಿ ಸಂಗ್ರಹಿಸಲಾಗಿದ್ದ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಪತ್ತು ನಿರ್ವಹಣ ಯೋಜನಾಧಿಕಾರಿ ಜೈವಂತ ಪಟಗಾರ್‌ ಉಪಸ್ಥಿತರಿದ್ದು, ತಂಡದ ಸದಸ್ಯರಿಗೆ ನಿರ್ದೇಶನ ನೀಡಿದ್ದರು. ಮೃತ ವ್ಯಕ್ತಿಯ ವಾರಸುದಾರರಿದ್ದಲ್ಲಿ ಬೆಳ್ತಂಗಡಿ ಆರಕ್ಷಕ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ

Related posts

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya
error: Content is protected !!