23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಸೆನ್ನೆಲ್‌ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.ಆದರೆ ಅವರ ವಾರಸುದಾರರ ಕುರಿತು ಈ ಪರಿಸರದ ಯಾರಿಗೂ ಮಾಹಿತಿ ಇಲ್ಲ. ಶುಕ್ರವಾರ ಸಂಜೆ ಇವರ ಮೃತದೇಹ ದೂರವಾಣಿ ವಿನಿಮಯ ಕೇಂದ್ರದ ಬಳಿ ಪತ್ತೆಯಾಗಿದೆ. ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ಸ್ವಯಂಸೇವಕರಾದ ರವೀಂದ್ರ, ಸುಧೀರ್‌ ಹಾಗೂ ರಾಘವೇಂದ್ರ ಇವರು ತತ್‌ಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

6.65 ಲಕ್ಷ ರೂ. ಹಣ ಪತ್ತೆ
ಪೊಲೀಸರ ಸಮ್ಮುಖದಲ್ಲಿ ಕುಟುಂಬದವರ ಪತ್ತೆಗಾಗಿ ವ್ಯಕ್ತಿಯ ಮೃತದೇಹದ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಪತ್ತೆಯಾಗಿದೆ. ಇದನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ. ವ್ಯಕ್ತಿಯು ಕೂಲಿ ಕೆಲಸ ಮಾಡಿ ಸಂಗ್ರಹಿಸಲಾಗಿದ್ದ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಪತ್ತು ನಿರ್ವಹಣ ಯೋಜನಾಧಿಕಾರಿ ಜೈವಂತ ಪಟಗಾರ್‌ ಉಪಸ್ಥಿತರಿದ್ದು, ತಂಡದ ಸದಸ್ಯರಿಗೆ ನಿರ್ದೇಶನ ನೀಡಿದ್ದರು. ಮೃತ ವ್ಯಕ್ತಿಯ ವಾರಸುದಾರರಿದ್ದಲ್ಲಿ ಬೆಳ್ತಂಗಡಿ ಆರಕ್ಷಕ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya
error: Content is protected !!