30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಸೆನ್ನೆಲ್‌ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.ಆದರೆ ಅವರ ವಾರಸುದಾರರ ಕುರಿತು ಈ ಪರಿಸರದ ಯಾರಿಗೂ ಮಾಹಿತಿ ಇಲ್ಲ. ಶುಕ್ರವಾರ ಸಂಜೆ ಇವರ ಮೃತದೇಹ ದೂರವಾಣಿ ವಿನಿಮಯ ಕೇಂದ್ರದ ಬಳಿ ಪತ್ತೆಯಾಗಿದೆ. ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ಸ್ವಯಂಸೇವಕರಾದ ರವೀಂದ್ರ, ಸುಧೀರ್‌ ಹಾಗೂ ರಾಘವೇಂದ್ರ ಇವರು ತತ್‌ಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

6.65 ಲಕ್ಷ ರೂ. ಹಣ ಪತ್ತೆ
ಪೊಲೀಸರ ಸಮ್ಮುಖದಲ್ಲಿ ಕುಟುಂಬದವರ ಪತ್ತೆಗಾಗಿ ವ್ಯಕ್ತಿಯ ಮೃತದೇಹದ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಪತ್ತೆಯಾಗಿದೆ. ಇದನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ. ವ್ಯಕ್ತಿಯು ಕೂಲಿ ಕೆಲಸ ಮಾಡಿ ಸಂಗ್ರಹಿಸಲಾಗಿದ್ದ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಪತ್ತು ನಿರ್ವಹಣ ಯೋಜನಾಧಿಕಾರಿ ಜೈವಂತ ಪಟಗಾರ್‌ ಉಪಸ್ಥಿತರಿದ್ದು, ತಂಡದ ಸದಸ್ಯರಿಗೆ ನಿರ್ದೇಶನ ನೀಡಿದ್ದರು. ಮೃತ ವ್ಯಕ್ತಿಯ ವಾರಸುದಾರರಿದ್ದಲ್ಲಿ ಬೆಳ್ತಂಗಡಿ ಆರಕ್ಷಕ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ

Related posts

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya
error: Content is protected !!