July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಸೆನ್ನೆಲ್‌ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.ಆದರೆ ಅವರ ವಾರಸುದಾರರ ಕುರಿತು ಈ ಪರಿಸರದ ಯಾರಿಗೂ ಮಾಹಿತಿ ಇಲ್ಲ. ಶುಕ್ರವಾರ ಸಂಜೆ ಇವರ ಮೃತದೇಹ ದೂರವಾಣಿ ವಿನಿಮಯ ಕೇಂದ್ರದ ಬಳಿ ಪತ್ತೆಯಾಗಿದೆ. ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ಸ್ವಯಂಸೇವಕರಾದ ರವೀಂದ್ರ, ಸುಧೀರ್‌ ಹಾಗೂ ರಾಘವೇಂದ್ರ ಇವರು ತತ್‌ಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

6.65 ಲಕ್ಷ ರೂ. ಹಣ ಪತ್ತೆ
ಪೊಲೀಸರ ಸಮ್ಮುಖದಲ್ಲಿ ಕುಟುಂಬದವರ ಪತ್ತೆಗಾಗಿ ವ್ಯಕ್ತಿಯ ಮೃತದೇಹದ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಪತ್ತೆಯಾಗಿದೆ. ಇದನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ. ವ್ಯಕ್ತಿಯು ಕೂಲಿ ಕೆಲಸ ಮಾಡಿ ಸಂಗ್ರಹಿಸಲಾಗಿದ್ದ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಪತ್ತು ನಿರ್ವಹಣ ಯೋಜನಾಧಿಕಾರಿ ಜೈವಂತ ಪಟಗಾರ್‌ ಉಪಸ್ಥಿತರಿದ್ದು, ತಂಡದ ಸದಸ್ಯರಿಗೆ ನಿರ್ದೇಶನ ನೀಡಿದ್ದರು. ಮೃತ ವ್ಯಕ್ತಿಯ ವಾರಸುದಾರರಿದ್ದಲ್ಲಿ ಬೆಳ್ತಂಗಡಿ ಆರಕ್ಷಕ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ

Related posts

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!