25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಇಂದು ತಂತ್ರಿಗಳ ಆಗಮನ, ಆಚಾರ್ಯವರಣ, ಪ್ರಾರ್ಥನೆ,ಸುದರ್ಶನ ಹೋಮ,ಆವಾಹನೆ, ಅಂಕುರಾರೋಹಣ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತುಕಲಶಾಭಿಷೇಕ ಮೊದಲಾದ ಕಾರ್ಯಕ್ರಮಗಳು ನೆರವೇರಿದವು.


ಬ್ರಹ್ಮಕಲಶೋತ್ಸವದ ಕಚೇರಿಯನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ, ಉಗ್ರಾಣವನ್ನು ಪ್ರಧಾನ ಅರ್ಚಕ ಗೋಪಾಲಕೃಷ್ಣ ಇರ್ವತ್ರಾಯ, ಅನ್ನ ಛತ್ರವನ್ನು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ,ಹೊರೆಕಾಣಿಕೆ ಸಮಿತಿ ಸಂಚಾಲಕ ಸುರೇಶ್ ನಾಯ್ಕ ಮೆಟ್ಟಿನಬಾಗಿಲು, ಉಗ್ರಾಣ ಸಮಿತಿ ಸಂಚಾಲಕ ಗೋಪಾಲಕೃಷ್ಣ ಮಡಿಯೂರು ವಿವಿಧ ಸಮಿತಿಗಳ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ಹೊರೆಕಾಣಿಕೆ: ಕಕ್ಕಿಂಜೆಯ ಇಷ್ಟ ದೇವತಾ ಬೆಟ್ಟದ ಬಳಿಯಿಂದ ಹೊರಟ ಹಸಿರುಕಾಣಿಕೆಯ ಮೆರವಣಿಗೆಯನ್ನು, ಹಿರಿಯ ಕೃಷಿಕ ಮಠದ ಮಜಲು ಅನಂತ ರಾವ್ ಉದ್ಘಾಟಿಸಿದರು. ತೋಟತ್ತಾಡಿ, ಚಿಬಿದ್ರೆ, ನೆರಿಯ, ಮುಂಡಾಜೆ, ಕಲ್ಮಂಜ, ಪುದುವೆಟ್ಟು ಗ್ರಾಮಸ್ಥರು ಭಾಗವಹಿಸಿ ಶೋಭಾ ಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರೆ ಕಾಣಿಕೆ ಸಮರ್ಪಿಸಿದರು.

Related posts

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!