July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಇಂದು ತಂತ್ರಿಗಳ ಆಗಮನ, ಆಚಾರ್ಯವರಣ, ಪ್ರಾರ್ಥನೆ,ಸುದರ್ಶನ ಹೋಮ,ಆವಾಹನೆ, ಅಂಕುರಾರೋಹಣ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತುಕಲಶಾಭಿಷೇಕ ಮೊದಲಾದ ಕಾರ್ಯಕ್ರಮಗಳು ನೆರವೇರಿದವು.


ಬ್ರಹ್ಮಕಲಶೋತ್ಸವದ ಕಚೇರಿಯನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ, ಉಗ್ರಾಣವನ್ನು ಪ್ರಧಾನ ಅರ್ಚಕ ಗೋಪಾಲಕೃಷ್ಣ ಇರ್ವತ್ರಾಯ, ಅನ್ನ ಛತ್ರವನ್ನು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ,ಹೊರೆಕಾಣಿಕೆ ಸಮಿತಿ ಸಂಚಾಲಕ ಸುರೇಶ್ ನಾಯ್ಕ ಮೆಟ್ಟಿನಬಾಗಿಲು, ಉಗ್ರಾಣ ಸಮಿತಿ ಸಂಚಾಲಕ ಗೋಪಾಲಕೃಷ್ಣ ಮಡಿಯೂರು ವಿವಿಧ ಸಮಿತಿಗಳ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ಹೊರೆಕಾಣಿಕೆ: ಕಕ್ಕಿಂಜೆಯ ಇಷ್ಟ ದೇವತಾ ಬೆಟ್ಟದ ಬಳಿಯಿಂದ ಹೊರಟ ಹಸಿರುಕಾಣಿಕೆಯ ಮೆರವಣಿಗೆಯನ್ನು, ಹಿರಿಯ ಕೃಷಿಕ ಮಠದ ಮಜಲು ಅನಂತ ರಾವ್ ಉದ್ಘಾಟಿಸಿದರು. ತೋಟತ್ತಾಡಿ, ಚಿಬಿದ್ರೆ, ನೆರಿಯ, ಮುಂಡಾಜೆ, ಕಲ್ಮಂಜ, ಪುದುವೆಟ್ಟು ಗ್ರಾಮಸ್ಥರು ಭಾಗವಹಿಸಿ ಶೋಭಾ ಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರೆ ಕಾಣಿಕೆ ಸಮರ್ಪಿಸಿದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!