37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

ಬೆಳ್ತಂಗಡಿ: ಇತ್ತೀಚೆಗೆ ಅಗಲಿದ ಹವ್ಯಾಸಿ ಹಿಮ್ಮೇಳ ಕಲಾವಿದರಾದ ದಿವಂಗತ ನರಸಿಂಹಮೂರ್ತಿ ಕುಂಟಿನಿ ಮತ್ತು ದಿವಂಗತ ಸುರೇಶ್ ಪೈ ಗುರುವಾಯನಕೆರೆ ಇವರ ಸಂಸ್ಮರಣಾರ್ಥ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾ ಸಂಘ ಕೊಯ್ಯರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಮೇ15 ರಂದು ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು ಇಲ್ಲಿ ಶ್ರದ್ಧಾಂಜಲಿ ಮತ್ತು ತಾಳಮದ್ದಳೆ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಮೊಕ್ತಸರ ಗಣೇಶ್ ಭಟ್, ರವೀಂದ್ರನಾಥ, ಹಿರಿಯ ಸಾಹಿತಿಗಳಾದ ಪ. ರಾಮಕೃಷ್ಣ ಶಾಸ್ತ್ರಿ, ಗೇರುಕಟ್ಟೆಯ ಪ್ರೊ. ಮಧೂರು ಮೋಹನ ಕಲ್ಲೂರಾಯ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕರಾದ ರಾಮಕೃಷ್ಣ ಭಟ್ ನಿನ್ನಿಕಲ್ಲು ನಿರೂಪಿಸಿದ ಕಾರ್ಯಕ್ರಮದಲ್ಲಿ ಅಗಲಿದ ಕಲಾವಿದರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ನರಕಾಸುರ ಮೋಕ್ಷ ಎಂಬ ಕಥಾ ಆಖ್ಯಾನವನ್ನು ಅಗಲಿದ ಕಲಾವಿದರ ಸಂಸ್ಕಾರಣಾರ್ಥ ತಾಳಮದ್ದಳೆ ರೂಪದಲ್ಲಿ ಪ್ರಸ್ತುತಪಡಿಸಲಾಯಿತು ಹಿಮ್ಮೇಳದಲ್ಲಿ ಭಾಗವತರಾಗಿ ಕಾರ್ತಿಕ್ ಬರೆಂಗಾಯ, ಅವನೀಶ ಭಟ್, ಚಂಡೆ ಮತ್ತು ಮೃದಂಗದಲ್ಲಿ ಆದಿತ್ಯ ಹೊಳ್ಳ, ಓಜಸ್ ನಾರಾಯಣ ಸಹಕರಿಸಿದರು. ಮುಮ್ಮೇಳದಲ್ಲಿ ಪ್ರೊ. ಮಧೂರು ಮೋಹನ ಕಲ್ಲೂರಾಯ, ಪ. ರಾಮಕೃಷ್ಣ ಶಾಸ್ತ್ರಿ, ಬಾಸಮೆ ನಾರಾಯಣ ಭಟ್, ವಿಜಯಕುಮಾರ್ ಕೊಯ್ಯರು, ರಾಮಕೃಷ್ಣ ಭಟ್ ನಿನ್ನಿಕಲ್ಲು ನಿರ್ವಹಿಸಿದರು.

Related posts

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya
error: Content is protected !!