24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

ಬೆಳ್ತಂಗಡಿ: ಇತ್ತೀಚೆಗೆ ಅಗಲಿದ ಹವ್ಯಾಸಿ ಹಿಮ್ಮೇಳ ಕಲಾವಿದರಾದ ದಿವಂಗತ ನರಸಿಂಹಮೂರ್ತಿ ಕುಂಟಿನಿ ಮತ್ತು ದಿವಂಗತ ಸುರೇಶ್ ಪೈ ಗುರುವಾಯನಕೆರೆ ಇವರ ಸಂಸ್ಮರಣಾರ್ಥ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾ ಸಂಘ ಕೊಯ್ಯರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಮೇ15 ರಂದು ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು ಇಲ್ಲಿ ಶ್ರದ್ಧಾಂಜಲಿ ಮತ್ತು ತಾಳಮದ್ದಳೆ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಮೊಕ್ತಸರ ಗಣೇಶ್ ಭಟ್, ರವೀಂದ್ರನಾಥ, ಹಿರಿಯ ಸಾಹಿತಿಗಳಾದ ಪ. ರಾಮಕೃಷ್ಣ ಶಾಸ್ತ್ರಿ, ಗೇರುಕಟ್ಟೆಯ ಪ್ರೊ. ಮಧೂರು ಮೋಹನ ಕಲ್ಲೂರಾಯ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕರಾದ ರಾಮಕೃಷ್ಣ ಭಟ್ ನಿನ್ನಿಕಲ್ಲು ನಿರೂಪಿಸಿದ ಕಾರ್ಯಕ್ರಮದಲ್ಲಿ ಅಗಲಿದ ಕಲಾವಿದರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ನರಕಾಸುರ ಮೋಕ್ಷ ಎಂಬ ಕಥಾ ಆಖ್ಯಾನವನ್ನು ಅಗಲಿದ ಕಲಾವಿದರ ಸಂಸ್ಕಾರಣಾರ್ಥ ತಾಳಮದ್ದಳೆ ರೂಪದಲ್ಲಿ ಪ್ರಸ್ತುತಪಡಿಸಲಾಯಿತು ಹಿಮ್ಮೇಳದಲ್ಲಿ ಭಾಗವತರಾಗಿ ಕಾರ್ತಿಕ್ ಬರೆಂಗಾಯ, ಅವನೀಶ ಭಟ್, ಚಂಡೆ ಮತ್ತು ಮೃದಂಗದಲ್ಲಿ ಆದಿತ್ಯ ಹೊಳ್ಳ, ಓಜಸ್ ನಾರಾಯಣ ಸಹಕರಿಸಿದರು. ಮುಮ್ಮೇಳದಲ್ಲಿ ಪ್ರೊ. ಮಧೂರು ಮೋಹನ ಕಲ್ಲೂರಾಯ, ಪ. ರಾಮಕೃಷ್ಣ ಶಾಸ್ತ್ರಿ, ಬಾಸಮೆ ನಾರಾಯಣ ಭಟ್, ವಿಜಯಕುಮಾರ್ ಕೊಯ್ಯರು, ರಾಮಕೃಷ್ಣ ಭಟ್ ನಿನ್ನಿಕಲ್ಲು ನಿರ್ವಹಿಸಿದರು.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya
error: Content is protected !!