22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

ಬೆಳ್ತಂಗಡಿ: ಇತ್ತೀಚೆಗೆ ಅಗಲಿದ ಹವ್ಯಾಸಿ ಹಿಮ್ಮೇಳ ಕಲಾವಿದರಾದ ದಿವಂಗತ ನರಸಿಂಹಮೂರ್ತಿ ಕುಂಟಿನಿ ಮತ್ತು ದಿವಂಗತ ಸುರೇಶ್ ಪೈ ಗುರುವಾಯನಕೆರೆ ಇವರ ಸಂಸ್ಮರಣಾರ್ಥ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾ ಸಂಘ ಕೊಯ್ಯರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಮೇ15 ರಂದು ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು ಇಲ್ಲಿ ಶ್ರದ್ಧಾಂಜಲಿ ಮತ್ತು ತಾಳಮದ್ದಳೆ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಮೊಕ್ತಸರ ಗಣೇಶ್ ಭಟ್, ರವೀಂದ್ರನಾಥ, ಹಿರಿಯ ಸಾಹಿತಿಗಳಾದ ಪ. ರಾಮಕೃಷ್ಣ ಶಾಸ್ತ್ರಿ, ಗೇರುಕಟ್ಟೆಯ ಪ್ರೊ. ಮಧೂರು ಮೋಹನ ಕಲ್ಲೂರಾಯ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕರಾದ ರಾಮಕೃಷ್ಣ ಭಟ್ ನಿನ್ನಿಕಲ್ಲು ನಿರೂಪಿಸಿದ ಕಾರ್ಯಕ್ರಮದಲ್ಲಿ ಅಗಲಿದ ಕಲಾವಿದರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ನರಕಾಸುರ ಮೋಕ್ಷ ಎಂಬ ಕಥಾ ಆಖ್ಯಾನವನ್ನು ಅಗಲಿದ ಕಲಾವಿದರ ಸಂಸ್ಕಾರಣಾರ್ಥ ತಾಳಮದ್ದಳೆ ರೂಪದಲ್ಲಿ ಪ್ರಸ್ತುತಪಡಿಸಲಾಯಿತು ಹಿಮ್ಮೇಳದಲ್ಲಿ ಭಾಗವತರಾಗಿ ಕಾರ್ತಿಕ್ ಬರೆಂಗಾಯ, ಅವನೀಶ ಭಟ್, ಚಂಡೆ ಮತ್ತು ಮೃದಂಗದಲ್ಲಿ ಆದಿತ್ಯ ಹೊಳ್ಳ, ಓಜಸ್ ನಾರಾಯಣ ಸಹಕರಿಸಿದರು. ಮುಮ್ಮೇಳದಲ್ಲಿ ಪ್ರೊ. ಮಧೂರು ಮೋಹನ ಕಲ್ಲೂರಾಯ, ಪ. ರಾಮಕೃಷ್ಣ ಶಾಸ್ತ್ರಿ, ಬಾಸಮೆ ನಾರಾಯಣ ಭಟ್, ವಿಜಯಕುಮಾರ್ ಕೊಯ್ಯರು, ರಾಮಕೃಷ್ಣ ಭಟ್ ನಿನ್ನಿಕಲ್ಲು ನಿರ್ವಹಿಸಿದರು.

Related posts

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!