25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

ಬೆಳ್ತಂಗಡಿ: ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಕಾಂಗ್ರೇಸ್ ಪಕ್ಷದಿಂದ ಆಯ್ಕೆಯಾಗಿರುವ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಬೇಕೆಂದು ಜೈನ ಸಮಾಜ ಆಗ್ರಹಿಸುತ್ತದೆ ಎಂದು ನಿರಂಜನ್ ಜೈನ್ ಕುದ್ಯಾಡಿ‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚುನಾವಣೆ ನಡೆದು ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಬಡ ಜನತೆಯ , ರಾಜ್ಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ಮಾದರಿ ಸರಕಾರ ತಮ್ಮಿಂದ ಹೊರಹೊಮ್ಮಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೇಸ್ ಪಕ್ಷ ಜಾತ್ಯಾತೀತ ನಿಲುವಿನಲ್ಲಿ ನಂಬಿಕೆ ಇದೆ ಎಂದು ಹೇಳುತ್ತಿದೆ. ಎಲ್ಲಾ ಧರ್ಮ, ಜಾತಿ, ಮತ, ಪಂಗಡಗಳನ್ನು ಒಂದೇ ರೀತಿಯಲ್ಲಿ ಕಾಣುತ್ತೇವೆ ಎಂದು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದೆ. ಅದರಂತೆ ನಡೆಯುವುದು ಕಾಂಗ್ರೇಸ್ ನ ನೈತಿಕ ಹೊಣೆಯಾಗಿದೆ.
ಜೈನರು ರಾಜಕೀಯದ ದೃಷ್ಟಿಯಿಂದ ಓಟು ಬ್ಯಾಂಕ್ ರಾಜಕಾರಣದಲ್ಲಿ ಸಂಖ್ಯಾ ದೃಷ್ಟಿಯಿಂದ ರಾಜಕೀಯ ಪಕ್ಷಗಳಿಗೆ ನಗಣ್ಯರಾಗಿದ್ದಾರೆ. ಆದರೆ ಜೈನ ಧರ್ಮೀಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಕರೆದುಕೊಂಡು ಹೋಗಬೇಕಾದದ್ದು ಸರಕಾರದ ಕರ್ತವ್ಯವಾಗಿದೆ. ಇಲ್ಲದೇ ಹೋದಲ್ಲಿ ಅಲ್ಪಸಂಖ್ಯಾತರಲ್ಲಿ ಅಲ್ಪಸಂಖ್ಯಾತರಾಗಿರುವ ಜೈನರಲ್ಲಿ ಅಭದ್ರತೆಯ ಭಾವನೆ ಬಲವಾಗುತ್ತದೆ.

ಆದರೆ ಜೈನರಲ್ಲಿ 50 % ಕ್ಕಿಂತಲೂ ಅಧಿಕ ಕಡುಬಡವರು ಇದ್ದಾರೆ. ಜೈನರಿಗೆ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ, ಸರಕಾರದಿಂದ ಸವಲತ್ತುಗಳೂ ಕೂಡ ಸಿಗುತ್ತಿಲ್ಲ.

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಕಾಂಗ್ರೇಸ್ ಪಕ್ಷದಿಂದ ಆಯ್ಕೆಯಾಗಿರುವ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಬೇಕೆಂದು ಜೈನ ಸಮಾಜ ಆಗ್ರಹಿಸುತ್ತೇವೆ. ಈ ಮೂಲಕ ಜೈನರಲ್ಲಿ ಇರಬಹುದಾದ ಅಭದ್ರತೆಯ ಭಾವ ಹೊರಟುಹೋಗುತ್ತದೆ. ಕಾಂಗ್ರೇಸ್ ಎಲ್ಲರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತದೆ ಎಂಬ ನಂಬಿಕೆ ನಮಗಿದೆ.

ಜೈನ ಸಮಾಜದ ಮುಖಂಡರು, ಸಂಘಟನೆಗಳು ಈ ನಿಟ್ಟಿನಲ್ಲಿ ಜೈನ ಧರ್ಮೀಯರೊಬ್ಬರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಸಂಘಟಿತರಾಗಿ ಪ್ರಯತ್ನವನ್ನು, ಹೋರಾಟವನ್ನು ಮಾಡುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಕೂಡಲೇ ಜೈನ ಸಮಾಜ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!