ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಬೆಳ್ತಂಗಡಿ : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ತಾಲೂಕಿನ ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.


ಈ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿಯವರು ಭೇಟಿ ನೀಡಿದರು. ಬೆಳ್ತಂಗಡಿ ತಾಲೂಕಿನ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋರಕ್ಷ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ಸಹಸಯೋಜಕರಾದ ಸುದೀರ್ ಚಾರ್ಮಾಡಿ, ರಿಜೇಶ್ ಗುರುವಾಯನಕೆರೆ, ಸತೀಶ್ ಮರಕಡ, ಸುರಕ್ಷಾ ಪ್ರಮುಖರಾದ ರತನ್ ಕೂಲ್ಲಿ, ಪ್ರವೀಣ್ ಶೆಟ್ಟಿ, ಪ್ರಚಾರ ಪ್ರಮುಖರಾದ ಗುರು ಲಾಯಿಲ ಉಪಸ್ಥಿತರಿದರು.

Leave a Comment

error: Content is protected !!