37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ.

ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ ಹಾಗೂ ಪುರುಷೋತ್ತಮ್ ಎಂಬುವರ ತೋಟದ 33 ಅಡಕೆ ಮರಗಳನ್ನು ಮುರಿದು ಹಾಕಿದೆ.ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿ ಮೂಲಕ ಆಗಮಿಸಿ, ಕೃಷಿ ನಾಶಗೊಳಿಸಿದ ಬಳಿಕ ಅದೇ ಹಾದಿಯಲ್ಲಿ ಅರಣ್ಯದ ಕಡೆ ನಿರ್ಗಮಿಸಿರುವ ಕುರುಹುಗಳು ಪತ್ತೆಯಾಗಿವೆ.

ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಸರದಲ್ಲಿ ಪರಿಶೀಲನೆ ನಡೆಸಿ ಪರಿಹಾರ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದೆ.

ಕಡಿರುದ್ಯಾವರ ಒಂಟಿ ಸಲಗ: ಬುಧವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಸಿರಿಬೈಲು ಕಿರಣ ಹೆಬ್ಬಾರ್ ರವರ ತೋಟಕ್ಕೆ ದಾಳಿ ನಡೆಸಿದ ಒಂಟಿ ಸಲಗ ಸುಮಾರು 15ಕ್ಕಿಂತ ಅಧಿಕ ಬಾಳೆ ಗಿಡಗಳನ್ನು ಧ್ವಂಸಗೈದಿದೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿಗೆ ಸಮೀಪದ ಇನ್ನೊಬ್ಬ ಕೃಷಿಕರ ತೋಟಕ್ಕೆ ಒಂಟಿ ಸಲಗ ಆಗಮಿಸಿದ್ದರು ಹೆಚ್ಚಿನ ಕೃಷಿ ನಾಶ ಮಾಡಿರಲಿಲ್ಲ.ಬುಧವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಂಡು ಬಂದ ಒಂಟಿ ಸಲಗ ಹಲವು ಹೊತ್ತು ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.

Related posts

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!