30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ.

ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ ಹಾಗೂ ಪುರುಷೋತ್ತಮ್ ಎಂಬುವರ ತೋಟದ 33 ಅಡಕೆ ಮರಗಳನ್ನು ಮುರಿದು ಹಾಕಿದೆ.ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿ ಮೂಲಕ ಆಗಮಿಸಿ, ಕೃಷಿ ನಾಶಗೊಳಿಸಿದ ಬಳಿಕ ಅದೇ ಹಾದಿಯಲ್ಲಿ ಅರಣ್ಯದ ಕಡೆ ನಿರ್ಗಮಿಸಿರುವ ಕುರುಹುಗಳು ಪತ್ತೆಯಾಗಿವೆ.

ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಸರದಲ್ಲಿ ಪರಿಶೀಲನೆ ನಡೆಸಿ ಪರಿಹಾರ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದೆ.

ಕಡಿರುದ್ಯಾವರ ಒಂಟಿ ಸಲಗ: ಬುಧವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಸಿರಿಬೈಲು ಕಿರಣ ಹೆಬ್ಬಾರ್ ರವರ ತೋಟಕ್ಕೆ ದಾಳಿ ನಡೆಸಿದ ಒಂಟಿ ಸಲಗ ಸುಮಾರು 15ಕ್ಕಿಂತ ಅಧಿಕ ಬಾಳೆ ಗಿಡಗಳನ್ನು ಧ್ವಂಸಗೈದಿದೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿಗೆ ಸಮೀಪದ ಇನ್ನೊಬ್ಬ ಕೃಷಿಕರ ತೋಟಕ್ಕೆ ಒಂಟಿ ಸಲಗ ಆಗಮಿಸಿದ್ದರು ಹೆಚ್ಚಿನ ಕೃಷಿ ನಾಶ ಮಾಡಿರಲಿಲ್ಲ.ಬುಧವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಂಡು ಬಂದ ಒಂಟಿ ಸಲಗ ಹಲವು ಹೊತ್ತು ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.

Related posts

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya
error: Content is protected !!