September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ.

ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ ಹಾಗೂ ಪುರುಷೋತ್ತಮ್ ಎಂಬುವರ ತೋಟದ 33 ಅಡಕೆ ಮರಗಳನ್ನು ಮುರಿದು ಹಾಕಿದೆ.ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿ ಮೂಲಕ ಆಗಮಿಸಿ, ಕೃಷಿ ನಾಶಗೊಳಿಸಿದ ಬಳಿಕ ಅದೇ ಹಾದಿಯಲ್ಲಿ ಅರಣ್ಯದ ಕಡೆ ನಿರ್ಗಮಿಸಿರುವ ಕುರುಹುಗಳು ಪತ್ತೆಯಾಗಿವೆ.

ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಸರದಲ್ಲಿ ಪರಿಶೀಲನೆ ನಡೆಸಿ ಪರಿಹಾರ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದೆ.

ಕಡಿರುದ್ಯಾವರ ಒಂಟಿ ಸಲಗ: ಬುಧವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಸಿರಿಬೈಲು ಕಿರಣ ಹೆಬ್ಬಾರ್ ರವರ ತೋಟಕ್ಕೆ ದಾಳಿ ನಡೆಸಿದ ಒಂಟಿ ಸಲಗ ಸುಮಾರು 15ಕ್ಕಿಂತ ಅಧಿಕ ಬಾಳೆ ಗಿಡಗಳನ್ನು ಧ್ವಂಸಗೈದಿದೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿಗೆ ಸಮೀಪದ ಇನ್ನೊಬ್ಬ ಕೃಷಿಕರ ತೋಟಕ್ಕೆ ಒಂಟಿ ಸಲಗ ಆಗಮಿಸಿದ್ದರು ಹೆಚ್ಚಿನ ಕೃಷಿ ನಾಶ ಮಾಡಿರಲಿಲ್ಲ.ಬುಧವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಂಡು ಬಂದ ಒಂಟಿ ಸಲಗ ಹಲವು ಹೊತ್ತು ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya
error: Content is protected !!