24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ.

ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ ಹಾಗೂ ಪುರುಷೋತ್ತಮ್ ಎಂಬುವರ ತೋಟದ 33 ಅಡಕೆ ಮರಗಳನ್ನು ಮುರಿದು ಹಾಕಿದೆ.ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿ ಮೂಲಕ ಆಗಮಿಸಿ, ಕೃಷಿ ನಾಶಗೊಳಿಸಿದ ಬಳಿಕ ಅದೇ ಹಾದಿಯಲ್ಲಿ ಅರಣ್ಯದ ಕಡೆ ನಿರ್ಗಮಿಸಿರುವ ಕುರುಹುಗಳು ಪತ್ತೆಯಾಗಿವೆ.

ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಸರದಲ್ಲಿ ಪರಿಶೀಲನೆ ನಡೆಸಿ ಪರಿಹಾರ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದೆ.

ಕಡಿರುದ್ಯಾವರ ಒಂಟಿ ಸಲಗ: ಬುಧವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಸಿರಿಬೈಲು ಕಿರಣ ಹೆಬ್ಬಾರ್ ರವರ ತೋಟಕ್ಕೆ ದಾಳಿ ನಡೆಸಿದ ಒಂಟಿ ಸಲಗ ಸುಮಾರು 15ಕ್ಕಿಂತ ಅಧಿಕ ಬಾಳೆ ಗಿಡಗಳನ್ನು ಧ್ವಂಸಗೈದಿದೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿಗೆ ಸಮೀಪದ ಇನ್ನೊಬ್ಬ ಕೃಷಿಕರ ತೋಟಕ್ಕೆ ಒಂಟಿ ಸಲಗ ಆಗಮಿಸಿದ್ದರು ಹೆಚ್ಚಿನ ಕೃಷಿ ನಾಶ ಮಾಡಿರಲಿಲ್ಲ.ಬುಧವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಂಡು ಬಂದ ಒಂಟಿ ಸಲಗ ಹಲವು ಹೊತ್ತು ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.

Related posts

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya
error: Content is protected !!