23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಮೇ 18ರಂದು ನಡೆದಿದೆ.
ಬೈಕ್‌ ಸವಾರ ಅಶೋಕ್ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿದ್ದು, ಕರ್ತವ್ಯ ಮುಗಿಸಿ ಧರ್ಮಸ್ಥಳದಿಂದ ಉಪ್ಪಾರಪಳಿಕೆ ಮಾರ್ಗವಾಗಿ ಪೆರಣದ ಮನೆಗೆ ಹೋಗುತ್ತಿದ್ದ ಸಂದರ್ಭ ಉಪ್ಪಿನಂಗಡಿಯಿಂದ ಉಪ್ಪಾರಪಳಿಕೆಯ ಕಡೆಗೆ ಬರುತ್ತಿದ್ದ ಉಪ್ಪಿನಂಗಡಿ ಮೂಲದ ಉದ್ಯಮಿಯೊಬ್ಬರ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya
error: Content is protected !!