23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ಒಟ್ಟು 587 ಅಂಕಗಳನ್ನು ಪಡೆದಿದ್ದು, ಇದೀಗ ಇಂಗ್ಲೀಷ್ ಭಾಷಾ ವಿಷಯದಲ್ಲಿ 2 ಅಂಕಗಳನ್ನು ಹೆಚ್ಚು ಪಡೆದು ಒಟ್ಟು 589 ಅಂಕಗಳೊಂದಿಗೆ ರಾಜ್ಯಕ್ಕೆ ಏಳನೆಯ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸಂಯುಕ್ತ ಪ್ರಭು ಮೊದಲು 585 ಅಂಕಗಳನ್ನು ಪಡೆದವರು ಇದೀಗ ಇಂಗ್ಲೀಷ್ ಭಾಷಾ ವಿಷಯದಲ್ಲಿ 3 ಅಂಕಗಳನ್ನು ಹೆಚ್ಚು ಪಡೆದು 588 ಅಂಕಗಳ ಮೂಲಕ ತಾಲೂಕಿಗೆ ದ್ವಿತೀಯ,ರಾಜ್ಯಕ್ಕೆ ಎಂಟನೆಯ ಸ್ಥಾನ ಪಡೆದು ಕೊಂಡಿದ್ದಾರೆ. ಇದೀಗ ತಾಲೂಕಿಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನಗಳನ್ನು ಎಕ್ಸೆಲ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಂತಾಗಿದೆ.

ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ

Related posts

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya
error: Content is protected !!