July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

ವೇಣೂರು: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದ್ದು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು ಪೋಲೀಸರು ಕೂಡಲೇ ಆಗಮಿಸಿ ಆರೋಪಿಯನ್ನು ಪತ್ತೆಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.

ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು. ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಬಜರಂಗದಳ ಜಿಲ್ಲಾ ಸಹ ಸಂಯೋಜಕ ಗುರುರಾಜ್ ಬಂಟ್ವಾಳ, ವೇಣೂರು ಪ್ರಖಂಡ ಬಜರಂಗದಳ ಸಂಯೋಜಕ ಸಂತೋಷ್ ಮಂಜಿಲ ಮತ್ತು ಪ್ರಮುಖರಾದ ಸಂತೋಷ್ ಕೊಕ್ರಾಡಿ,ನಿರಂಜನ್ ಕೊಕ್ರಾಡಿ ಹಾಗೂ ಸಂಘಟನೆಯ ಸದಸ್ಯರು ಇದ್ದರು.

Related posts

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya
error: Content is protected !!