37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

ವೇಣೂರು: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದ್ದು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು ಪೋಲೀಸರು ಕೂಡಲೇ ಆಗಮಿಸಿ ಆರೋಪಿಯನ್ನು ಪತ್ತೆಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.

ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು. ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಬಜರಂಗದಳ ಜಿಲ್ಲಾ ಸಹ ಸಂಯೋಜಕ ಗುರುರಾಜ್ ಬಂಟ್ವಾಳ, ವೇಣೂರು ಪ್ರಖಂಡ ಬಜರಂಗದಳ ಸಂಯೋಜಕ ಸಂತೋಷ್ ಮಂಜಿಲ ಮತ್ತು ಪ್ರಮುಖರಾದ ಸಂತೋಷ್ ಕೊಕ್ರಾಡಿ,ನಿರಂಜನ್ ಕೊಕ್ರಾಡಿ ಹಾಗೂ ಸಂಘಟನೆಯ ಸದಸ್ಯರು ಇದ್ದರು.

Related posts

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya
error: Content is protected !!