22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ಒಟ್ಟು 587 ಅಂಕಗಳನ್ನು ಪಡೆದಿದ್ದು, ಇದೀಗ ಇಂಗ್ಲೀಷ್ ಭಾಷಾ ವಿಷಯದಲ್ಲಿ 2 ಅಂಕಗಳನ್ನು ಹೆಚ್ಚು ಪಡೆದು ಒಟ್ಟು 589 ಅಂಕಗಳೊಂದಿಗೆ ರಾಜ್ಯಕ್ಕೆ ಏಳನೆಯ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸಂಯುಕ್ತ ಪ್ರಭು ಮೊದಲು 585 ಅಂಕಗಳನ್ನು ಪಡೆದವರು ಇದೀಗ ಇಂಗ್ಲೀಷ್ ಭಾಷಾ ವಿಷಯದಲ್ಲಿ 3 ಅಂಕಗಳನ್ನು ಹೆಚ್ಚು ಪಡೆದು 588 ಅಂಕಗಳ ಮೂಲಕ ತಾಲೂಕಿಗೆ ದ್ವಿತೀಯ,ರಾಜ್ಯಕ್ಕೆ ಎಂಟನೆಯ ಸ್ಥಾನ ಪಡೆದು ಕೊಂಡಿದ್ದಾರೆ. ಇದೀಗ ತಾಲೂಕಿಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನಗಳನ್ನು ಎಕ್ಸೆಲ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಂತಾಗಿದೆ.

ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya
error: Content is protected !!