23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಹರೀಶ್ ಪೂಂಜರವರ ಅಪ್ಪಟ ಅಭಿಮಾನಿಗಳಾದ ಉಜಿರೆಯ ಆಟೋ ಡ್ರೈವರ್ ಸುಧೀರ್ ಕಲ್ಮಂಜ, ಎಲೆಕ್ಟ್ರಿಷಿಯನ್ ರವೀಂದ್ರ ಉಜಿರೆ, ಉಜಿರೆಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರಾಧಾಕೃಷ್ಣ ಕಲ್ಮಂಜ ಅವರ ಸಂಕಲ್ಪ ನೇರವೇರಿದ್ದು ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಉಜಿರೆಯಿಂದ ಇಗಾಗಲೇ ಪಾದಯಾತ್ರೆ ಕೈಗೊಂಡು ರಸ್ತೆ ಸಮೀಪದಲ್ಲಿರುವ ಹಲವಾರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಉಜಿರೆಯಿಂದ ಕಟೀಲು ಕ್ಷೇತ್ರಕ್ಕೆ ಅಂದಾಜು 70 ಕಿ‌.ಮೀ ದೂರವಿದ್ದು ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ತಲುಪಲಿದ್ದಾರೆ. 2018 ರ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿಯೂ ಹರೀಶ್ ಪೂಂಜರ ಗೆಲುವಿಗೆ ಪ್ರಾರ್ಥಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya
error: Content is protected !!