ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಹರೀಶ್ ಪೂಂಜರವರ ಅಪ್ಪಟ ಅಭಿಮಾನಿಗಳಾದ ಉಜಿರೆಯ ಆಟೋ ಡ್ರೈವರ್ ಸುಧೀರ್ ಕಲ್ಮಂಜ, ಎಲೆಕ್ಟ್ರಿಷಿಯನ್ ರವೀಂದ್ರ ಉಜಿರೆ, ಉಜಿರೆಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರಾಧಾಕೃಷ್ಣ ಕಲ್ಮಂಜ ಅವರ ಸಂಕಲ್ಪ ನೇರವೇರಿದ್ದು ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಉಜಿರೆಯಿಂದ ಇಗಾಗಲೇ ಪಾದಯಾತ್ರೆ ಕೈಗೊಂಡು ರಸ್ತೆ ಸಮೀಪದಲ್ಲಿರುವ ಹಲವಾರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಉಜಿರೆಯಿಂದ ಕಟೀಲು ಕ್ಷೇತ್ರಕ್ಕೆ ಅಂದಾಜು 70 ಕಿ‌.ಮೀ ದೂರವಿದ್ದು ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ತಲುಪಲಿದ್ದಾರೆ. 2018 ರ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿಯೂ ಹರೀಶ್ ಪೂಂಜರ ಗೆಲುವಿಗೆ ಪ್ರಾರ್ಥಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

Leave a Comment

error: Content is protected !!