23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಹರೀಶ್ ಪೂಂಜರವರ ಅಪ್ಪಟ ಅಭಿಮಾನಿಗಳಾದ ಉಜಿರೆಯ ಆಟೋ ಡ್ರೈವರ್ ಸುಧೀರ್ ಕಲ್ಮಂಜ, ಎಲೆಕ್ಟ್ರಿಷಿಯನ್ ರವೀಂದ್ರ ಉಜಿರೆ, ಉಜಿರೆಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರಾಧಾಕೃಷ್ಣ ಕಲ್ಮಂಜ ಅವರ ಸಂಕಲ್ಪ ನೇರವೇರಿದ್ದು ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಉಜಿರೆಯಿಂದ ಇಗಾಗಲೇ ಪಾದಯಾತ್ರೆ ಕೈಗೊಂಡು ರಸ್ತೆ ಸಮೀಪದಲ್ಲಿರುವ ಹಲವಾರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಉಜಿರೆಯಿಂದ ಕಟೀಲು ಕ್ಷೇತ್ರಕ್ಕೆ ಅಂದಾಜು 70 ಕಿ‌.ಮೀ ದೂರವಿದ್ದು ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ತಲುಪಲಿದ್ದಾರೆ. 2018 ರ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿಯೂ ಹರೀಶ್ ಪೂಂಜರ ಗೆಲುವಿಗೆ ಪ್ರಾರ್ಥಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya
error: Content is protected !!