July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಹರೀಶ್ ಪೂಂಜರವರ ಅಪ್ಪಟ ಅಭಿಮಾನಿಗಳಾದ ಉಜಿರೆಯ ಆಟೋ ಡ್ರೈವರ್ ಸುಧೀರ್ ಕಲ್ಮಂಜ, ಎಲೆಕ್ಟ್ರಿಷಿಯನ್ ರವೀಂದ್ರ ಉಜಿರೆ, ಉಜಿರೆಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರಾಧಾಕೃಷ್ಣ ಕಲ್ಮಂಜ ಅವರ ಸಂಕಲ್ಪ ನೇರವೇರಿದ್ದು ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಉಜಿರೆಯಿಂದ ಇಗಾಗಲೇ ಪಾದಯಾತ್ರೆ ಕೈಗೊಂಡು ರಸ್ತೆ ಸಮೀಪದಲ್ಲಿರುವ ಹಲವಾರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಉಜಿರೆಯಿಂದ ಕಟೀಲು ಕ್ಷೇತ್ರಕ್ಕೆ ಅಂದಾಜು 70 ಕಿ‌.ಮೀ ದೂರವಿದ್ದು ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ತಲುಪಲಿದ್ದಾರೆ. 2018 ರ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿಯೂ ಹರೀಶ್ ಪೂಂಜರ ಗೆಲುವಿಗೆ ಪ್ರಾರ್ಥಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
error: Content is protected !!