23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಹರೀಶ್ ಪೂಂಜರವರ ಅಪ್ಪಟ ಅಭಿಮಾನಿಗಳಾದ ಉಜಿರೆಯ ಆಟೋ ಡ್ರೈವರ್ ಸುಧೀರ್ ಕಲ್ಮಂಜ, ಎಲೆಕ್ಟ್ರಿಷಿಯನ್ ರವೀಂದ್ರ ಉಜಿರೆ, ಉಜಿರೆಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರಾಧಾಕೃಷ್ಣ ಕಲ್ಮಂಜ ಅವರ ಸಂಕಲ್ಪ ನೇರವೇರಿದ್ದು ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಉಜಿರೆಯಿಂದ ಇಗಾಗಲೇ ಪಾದಯಾತ್ರೆ ಕೈಗೊಂಡು ರಸ್ತೆ ಸಮೀಪದಲ್ಲಿರುವ ಹಲವಾರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಉಜಿರೆಯಿಂದ ಕಟೀಲು ಕ್ಷೇತ್ರಕ್ಕೆ ಅಂದಾಜು 70 ಕಿ‌.ಮೀ ದೂರವಿದ್ದು ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ತಲುಪಲಿದ್ದಾರೆ. 2018 ರ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿಯೂ ಹರೀಶ್ ಪೂಂಜರ ಗೆಲುವಿಗೆ ಪ್ರಾರ್ಥಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

Related posts

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!