30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ  ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ವಿವಿಧ ವಿಷಯಗಳಿಗೆ ಹಾಗೂ ವಿಚಾರಕ್ಕೆ  ಸಂಬಂಧಪಟ್ಟ ಹಲವಾರು ಕಾರ್ಯಗಾರಗಳು ನಡೆಯಲಿದ್ದು , ಅದರ ಮುನ್ಸೂಚನೆಯೊಂದಿಗೆ  ಸರಣಿ ಕಾರ್ಯಗಾರಗಳ ಉದ್ಘಾಟನೆಯನ್ನು ಉಜಿರೆಯ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ  ಎಸ್ .  ದೀಪ ಬೆಳಗಿಸಿ ಉದ್ಘಾಟಿಸಿ ದರು .   

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕ್ಷಕರು ಬದಲಾಗುತ್ತಿರುವ ವರ್ತಮಾನಕ್ಕೆ ಸರಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸದಾ ಹೊಸತನವನ್ನು ಕಲಿಯುವ ವಾಂಛೆ  ಇರಬೇಕು. ಚಟುವಟಿಕೆಗಳ ಮುಖಾಂತರ ಕಲಿತಂತಹ ವಿದ್ಯೆ ಯಾವತ್ತೂ  ಶಾಶ್ವತವಾಗಿರುತ್ತದೆ. ಮನದಾಳಕ್ಕೆ ಇಳಿದು ಸುಲಭವಾಗಿ ಅರ್ಥವಾಗುತ್ತದೆ ಹೀಗಾಗಿ ವಿಜ್ಞಾನ ಎಂದರೆ ಪ್ರಾಯೋಗಿಕವಾಗಿ ಕಲಿಸಿದರೆ ಮಾತ್ರ ಅದು ಮಕ್ಕಳ ಮನಸ್ಸಿನೊಳಕ್ಕೆ ಇಳಿಯುತ್ತದೆ ಎಂದರು.   

ಈ ಕಾರ್ಯಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ  ಬಿ ಸೋಮಶೇಖರ್ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ವಿವಿಧ ಶಾಲಾ ಮುಖ್ಯೋಪಾಧ್ಯಾಯರುಗಳು ಹಾಗೂ ವಿಜ್ಞಾನ ಶಿಕ್ಷಕರುಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ವೀಣಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆ ಇದರ ಮುಖ್ಯೋಪಾಧ್ಯಾಯ  ಮನಮೋಹನ್ ನಾಯಕ್ ಸ್ವಾಗತಿಸಿದರು.

Related posts

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!