24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ  ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ವಿವಿಧ ವಿಷಯಗಳಿಗೆ ಹಾಗೂ ವಿಚಾರಕ್ಕೆ  ಸಂಬಂಧಪಟ್ಟ ಹಲವಾರು ಕಾರ್ಯಗಾರಗಳು ನಡೆಯಲಿದ್ದು , ಅದರ ಮುನ್ಸೂಚನೆಯೊಂದಿಗೆ  ಸರಣಿ ಕಾರ್ಯಗಾರಗಳ ಉದ್ಘಾಟನೆಯನ್ನು ಉಜಿರೆಯ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ  ಎಸ್ .  ದೀಪ ಬೆಳಗಿಸಿ ಉದ್ಘಾಟಿಸಿ ದರು .   

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕ್ಷಕರು ಬದಲಾಗುತ್ತಿರುವ ವರ್ತಮಾನಕ್ಕೆ ಸರಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸದಾ ಹೊಸತನವನ್ನು ಕಲಿಯುವ ವಾಂಛೆ  ಇರಬೇಕು. ಚಟುವಟಿಕೆಗಳ ಮುಖಾಂತರ ಕಲಿತಂತಹ ವಿದ್ಯೆ ಯಾವತ್ತೂ  ಶಾಶ್ವತವಾಗಿರುತ್ತದೆ. ಮನದಾಳಕ್ಕೆ ಇಳಿದು ಸುಲಭವಾಗಿ ಅರ್ಥವಾಗುತ್ತದೆ ಹೀಗಾಗಿ ವಿಜ್ಞಾನ ಎಂದರೆ ಪ್ರಾಯೋಗಿಕವಾಗಿ ಕಲಿಸಿದರೆ ಮಾತ್ರ ಅದು ಮಕ್ಕಳ ಮನಸ್ಸಿನೊಳಕ್ಕೆ ಇಳಿಯುತ್ತದೆ ಎಂದರು.   

ಈ ಕಾರ್ಯಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ  ಬಿ ಸೋಮಶೇಖರ್ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ವಿವಿಧ ಶಾಲಾ ಮುಖ್ಯೋಪಾಧ್ಯಾಯರುಗಳು ಹಾಗೂ ವಿಜ್ಞಾನ ಶಿಕ್ಷಕರುಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ವೀಣಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆ ಇದರ ಮುಖ್ಯೋಪಾಧ್ಯಾಯ  ಮನಮೋಹನ್ ನಾಯಕ್ ಸ್ವಾಗತಿಸಿದರು.

Related posts

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!