September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ  ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ವಿವಿಧ ವಿಷಯಗಳಿಗೆ ಹಾಗೂ ವಿಚಾರಕ್ಕೆ  ಸಂಬಂಧಪಟ್ಟ ಹಲವಾರು ಕಾರ್ಯಗಾರಗಳು ನಡೆಯಲಿದ್ದು , ಅದರ ಮುನ್ಸೂಚನೆಯೊಂದಿಗೆ  ಸರಣಿ ಕಾರ್ಯಗಾರಗಳ ಉದ್ಘಾಟನೆಯನ್ನು ಉಜಿರೆಯ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ  ಎಸ್ .  ದೀಪ ಬೆಳಗಿಸಿ ಉದ್ಘಾಟಿಸಿ ದರು .   

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕ್ಷಕರು ಬದಲಾಗುತ್ತಿರುವ ವರ್ತಮಾನಕ್ಕೆ ಸರಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸದಾ ಹೊಸತನವನ್ನು ಕಲಿಯುವ ವಾಂಛೆ  ಇರಬೇಕು. ಚಟುವಟಿಕೆಗಳ ಮುಖಾಂತರ ಕಲಿತಂತಹ ವಿದ್ಯೆ ಯಾವತ್ತೂ  ಶಾಶ್ವತವಾಗಿರುತ್ತದೆ. ಮನದಾಳಕ್ಕೆ ಇಳಿದು ಸುಲಭವಾಗಿ ಅರ್ಥವಾಗುತ್ತದೆ ಹೀಗಾಗಿ ವಿಜ್ಞಾನ ಎಂದರೆ ಪ್ರಾಯೋಗಿಕವಾಗಿ ಕಲಿಸಿದರೆ ಮಾತ್ರ ಅದು ಮಕ್ಕಳ ಮನಸ್ಸಿನೊಳಕ್ಕೆ ಇಳಿಯುತ್ತದೆ ಎಂದರು.   

ಈ ಕಾರ್ಯಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ  ಬಿ ಸೋಮಶೇಖರ್ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ವಿವಿಧ ಶಾಲಾ ಮುಖ್ಯೋಪಾಧ್ಯಾಯರುಗಳು ಹಾಗೂ ವಿಜ್ಞಾನ ಶಿಕ್ಷಕರುಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ವೀಣಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆ ಇದರ ಮುಖ್ಯೋಪಾಧ್ಯಾಯ  ಮನಮೋಹನ್ ನಾಯಕ್ ಸ್ವಾಗತಿಸಿದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya
error: Content is protected !!