25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಹರೀಶ್ ಪೂಂಜರವರ ಅಪ್ಪಟ ಅಭಿಮಾನಿಗಳಾದ ಉಜಿರೆಯ ಆಟೋ ಡ್ರೈವರ್ ಸುಧೀರ್ ಕಲ್ಮಂಜ, ಎಲೆಕ್ಟ್ರಿಷಿಯನ್ ರವೀಂದ್ರ ಉಜಿರೆ, ಉಜಿರೆಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರಾಧಾಕೃಷ್ಣ ಕಲ್ಮಂಜ ಅವರ ಸಂಕಲ್ಪ ನೇರವೇರಿದ್ದು ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಉಜಿರೆಯಿಂದ ಇಗಾಗಲೇ ಪಾದಯಾತ್ರೆ ಕೈಗೊಂಡು ರಸ್ತೆ ಸಮೀಪದಲ್ಲಿರುವ ಹಲವಾರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಉಜಿರೆಯಿಂದ ಕಟೀಲು ಕ್ಷೇತ್ರಕ್ಕೆ ಅಂದಾಜು 70 ಕಿ‌.ಮೀ ದೂರವಿದ್ದು ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ತಲುಪಲಿದ್ದಾರೆ. 2018 ರ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿಯೂ ಹರೀಶ್ ಪೂಂಜರ ಗೆಲುವಿಗೆ ಪ್ರಾರ್ಥಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

Related posts

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya
error: Content is protected !!