July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಹರೀಶ್ ಪೂಂಜರವರ ಅಪ್ಪಟ ಅಭಿಮಾನಿಗಳಾದ ಉಜಿರೆಯ ಆಟೋ ಡ್ರೈವರ್ ಸುಧೀರ್ ಕಲ್ಮಂಜ, ಎಲೆಕ್ಟ್ರಿಷಿಯನ್ ರವೀಂದ್ರ ಉಜಿರೆ, ಉಜಿರೆಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರಾಧಾಕೃಷ್ಣ ಕಲ್ಮಂಜ ಅವರ ಸಂಕಲ್ಪ ನೇರವೇರಿದ್ದು ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಉಜಿರೆಯಿಂದ ಇಗಾಗಲೇ ಪಾದಯಾತ್ರೆ ಕೈಗೊಂಡು ರಸ್ತೆ ಸಮೀಪದಲ್ಲಿರುವ ಹಲವಾರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಉಜಿರೆಯಿಂದ ಕಟೀಲು ಕ್ಷೇತ್ರಕ್ಕೆ ಅಂದಾಜು 70 ಕಿ‌.ಮೀ ದೂರವಿದ್ದು ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ತಲುಪಲಿದ್ದಾರೆ. 2018 ರ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿಯೂ ಹರೀಶ್ ಪೂಂಜರ ಗೆಲುವಿಗೆ ಪ್ರಾರ್ಥಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

Related posts

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya
error: Content is protected !!