September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

ಬೆಳ್ತಂಗಡಿ; ಗುರುವಾಯನಕೆರೆ ಪೇಟೆಯ ಪ್ರಯಾಣಿಕರ ತಂಗುದಾಣದ ಬಳಿ ಪಾದಚಾರಿಯೊಬ್ಬರಿಗೆ ಶಾಲಾ ವಾಹನ ಡಿಕ್ಕಿ ಹೊಡೆದು, ಆಸ್ಪತ್ರೆಗೆ ‌ಸಾಗಿಸುವ ಹಂತದಲ್ಲಿ ಅವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಕಡಿರುದ್ಯಾವರ ಗ್ರಾಮದ ಗಜಂತ್ತೋಡಿ ದರ್ಖಾಸು ಮನೆ ಸುರೇಶ್‌ ನಾಯ್ಕ ಮೃತಪಟ್ಟವರು. ‌‌ಕುವೆಟ್ಟು ಗ್ರಾಮದ ಗುರುವಾನಕೆರೆ ಜಂಕ್ಷನ್‌ ಬಳಿ ಪಾದಾಚಾರಿ ಸುರೇಶ ನಾಯ್ಕ ಅವರು ರಸ್ತೆ ಬದಿಯಲ್ಲಿ ರಸ್ತೆ ದಾಟಲು ನಿಂತು ಕೊಂಡಿರುವಾಗ ಬೆಳ್ತಂಗಡಿ ಕಡೆಯಿಂದ ಮದ್ದಡ್ಕ ಕಡೆಗೆ ಖಾಸಗಿ ಶಾಲಾ ಬಸ್ಸ್‌ ನ್ನು ಅದರ ಚಾಲಕ ಶಶಿಧರ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಸುರೇಶ ನಾಯ್ಕ ರವರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಅವರ ಕಾಲಿನ ಮೇಲೆ ಹರಿದು ಹೋಗಿ, ಅವರಿಗೆ ಎಡ ಕಾಲಿನ ಪಾದಕ್ಕೆ, ಎಡ ಕಾಲಿನ ಕೋಲು ಕಾಲಿಗೆ, ಎಡ ಕೆನ್ನೆಗೆ, ಎಡ ಸೊಂಟಕ್ಕೆ ತೀವ್ರ ಗಾಯಗಳಾಗಿದ್ದು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ಸಾಗಿಸುತ್ತಿರುವಾಗಲೇ ದಾರಿ ಮಧ್ಯ ಮೃತ ಪಟ್ಟರೆನ್ನಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ‌.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!