22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

ಬೆಳ್ತಂಗಡಿ; ಗುರುವಾಯನಕೆರೆ ಪೇಟೆಯ ಪ್ರಯಾಣಿಕರ ತಂಗುದಾಣದ ಬಳಿ ಪಾದಚಾರಿಯೊಬ್ಬರಿಗೆ ಶಾಲಾ ವಾಹನ ಡಿಕ್ಕಿ ಹೊಡೆದು, ಆಸ್ಪತ್ರೆಗೆ ‌ಸಾಗಿಸುವ ಹಂತದಲ್ಲಿ ಅವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಕಡಿರುದ್ಯಾವರ ಗ್ರಾಮದ ಗಜಂತ್ತೋಡಿ ದರ್ಖಾಸು ಮನೆ ಸುರೇಶ್‌ ನಾಯ್ಕ ಮೃತಪಟ್ಟವರು. ‌‌ಕುವೆಟ್ಟು ಗ್ರಾಮದ ಗುರುವಾನಕೆರೆ ಜಂಕ್ಷನ್‌ ಬಳಿ ಪಾದಾಚಾರಿ ಸುರೇಶ ನಾಯ್ಕ ಅವರು ರಸ್ತೆ ಬದಿಯಲ್ಲಿ ರಸ್ತೆ ದಾಟಲು ನಿಂತು ಕೊಂಡಿರುವಾಗ ಬೆಳ್ತಂಗಡಿ ಕಡೆಯಿಂದ ಮದ್ದಡ್ಕ ಕಡೆಗೆ ಖಾಸಗಿ ಶಾಲಾ ಬಸ್ಸ್‌ ನ್ನು ಅದರ ಚಾಲಕ ಶಶಿಧರ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಸುರೇಶ ನಾಯ್ಕ ರವರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಅವರ ಕಾಲಿನ ಮೇಲೆ ಹರಿದು ಹೋಗಿ, ಅವರಿಗೆ ಎಡ ಕಾಲಿನ ಪಾದಕ್ಕೆ, ಎಡ ಕಾಲಿನ ಕೋಲು ಕಾಲಿಗೆ, ಎಡ ಕೆನ್ನೆಗೆ, ಎಡ ಸೊಂಟಕ್ಕೆ ತೀವ್ರ ಗಾಯಗಳಾಗಿದ್ದು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ಸಾಗಿಸುತ್ತಿರುವಾಗಲೇ ದಾರಿ ಮಧ್ಯ ಮೃತ ಪಟ್ಟರೆನ್ನಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ‌.

Related posts

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya
error: Content is protected !!