23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಮಂಗಳೂರು ನಗರ ವಲಯ ಸಮಿತಿ ನೇತೃತ್ವದಲ್ಲಿ ಯುವವಾಹಿನಿ ಮಂಗಳೂರು ಘಟಕ ಹಾಗೂ ಕಂಕನಾಡಿ ಘಟಕ ಸಹಕಾರದಲ್ಲಿ ಗೆಜ್ಜೆಗಿರಿ ಮೇಳದವರಿಂದ ಮಂಗಳೂರಿನ ಪುರಭವನದಲ್ಲಿ ಜರಗಿದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಪ್ರಸಂಗವು ಪ್ರಾರಂಭಗೊಂಡ ಈ ವರ್ಷದಲ್ಲಿಯೇ ದಾಖಲೆಯ 150ನೇ ಪ್ರದರ್ಶನ ಗೊಂಡ ಬಗ್ಗೆ ಸಂಭ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮೇಳದ ಸಂಚಾಲಕರಾಗಿ ದಕ್ಷತೆಯಿಂದ ಕಾರ್ಯಮೆರೆದ ನವೀನ್ ಸುವರ್ಣ ಸಜಿಪ, ನವೀನ್ ಅಮೀನ್ ಶಂಕರಪುರ ಮತ್ತು ಯಕ್ಷಪ್ರಸಂಗ ಕತೃ ನಿತಿನ್ ಪೂಜಾರಿ ತೆಂಕಕಾರಂದೂರು ಹಾಗೂ ಮೇಳದ ಹಿಮ್ಮೇಳ, ಮುಮ್ಮೇಳದ ಎಲ್ಲಾ ಕಲಾವಿದರನ್ನು ಸನ್ಮಾನಿಸಲಾಯಿತು. ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆಯ 150 ರ ಪ್ರದರ್ಶನವನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಎಂ. ಪಿ. ದಿನೇಶ್, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಮಂಗಳೂರು ನಗರ ಸಮಿತಿಯ ಪ್ರಧಾನ ಸಂಚಾಲಕರಾದ ಹರೀಶ್ ಕೆ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ರಾಜೇಶ್, ಮಂಗಳೂರು ಘಟಕದ ಅಧ್ಯಕ್ಷ ಗಣೇಶ್ ಸುವರ್ಣ, ಕಂಕನಾಡಿ ಘಟಕದ ಅಧ್ಯಕ್ಷ ಪ್ರಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya
error: Content is protected !!