23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಮಂಗಳೂರು ನಗರ ವಲಯ ಸಮಿತಿ ನೇತೃತ್ವದಲ್ಲಿ ಯುವವಾಹಿನಿ ಮಂಗಳೂರು ಘಟಕ ಹಾಗೂ ಕಂಕನಾಡಿ ಘಟಕ ಸಹಕಾರದಲ್ಲಿ ಗೆಜ್ಜೆಗಿರಿ ಮೇಳದವರಿಂದ ಮಂಗಳೂರಿನ ಪುರಭವನದಲ್ಲಿ ಜರಗಿದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಪ್ರಸಂಗವು ಪ್ರಾರಂಭಗೊಂಡ ಈ ವರ್ಷದಲ್ಲಿಯೇ ದಾಖಲೆಯ 150ನೇ ಪ್ರದರ್ಶನ ಗೊಂಡ ಬಗ್ಗೆ ಸಂಭ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮೇಳದ ಸಂಚಾಲಕರಾಗಿ ದಕ್ಷತೆಯಿಂದ ಕಾರ್ಯಮೆರೆದ ನವೀನ್ ಸುವರ್ಣ ಸಜಿಪ, ನವೀನ್ ಅಮೀನ್ ಶಂಕರಪುರ ಮತ್ತು ಯಕ್ಷಪ್ರಸಂಗ ಕತೃ ನಿತಿನ್ ಪೂಜಾರಿ ತೆಂಕಕಾರಂದೂರು ಹಾಗೂ ಮೇಳದ ಹಿಮ್ಮೇಳ, ಮುಮ್ಮೇಳದ ಎಲ್ಲಾ ಕಲಾವಿದರನ್ನು ಸನ್ಮಾನಿಸಲಾಯಿತು. ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆಯ 150 ರ ಪ್ರದರ್ಶನವನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಎಂ. ಪಿ. ದಿನೇಶ್, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಮಂಗಳೂರು ನಗರ ಸಮಿತಿಯ ಪ್ರಧಾನ ಸಂಚಾಲಕರಾದ ಹರೀಶ್ ಕೆ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ರಾಜೇಶ್, ಮಂಗಳೂರು ಘಟಕದ ಅಧ್ಯಕ್ಷ ಗಣೇಶ್ ಸುವರ್ಣ, ಕಂಕನಾಡಿ ಘಟಕದ ಅಧ್ಯಕ್ಷ ಪ್ರಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.

Related posts

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!