22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಮಂಗಳೂರು ನಗರ ವಲಯ ಸಮಿತಿ ನೇತೃತ್ವದಲ್ಲಿ ಯುವವಾಹಿನಿ ಮಂಗಳೂರು ಘಟಕ ಹಾಗೂ ಕಂಕನಾಡಿ ಘಟಕ ಸಹಕಾರದಲ್ಲಿ ಗೆಜ್ಜೆಗಿರಿ ಮೇಳದವರಿಂದ ಮಂಗಳೂರಿನ ಪುರಭವನದಲ್ಲಿ ಜರಗಿದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಪ್ರಸಂಗವು ಪ್ರಾರಂಭಗೊಂಡ ಈ ವರ್ಷದಲ್ಲಿಯೇ ದಾಖಲೆಯ 150ನೇ ಪ್ರದರ್ಶನ ಗೊಂಡ ಬಗ್ಗೆ ಸಂಭ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮೇಳದ ಸಂಚಾಲಕರಾಗಿ ದಕ್ಷತೆಯಿಂದ ಕಾರ್ಯಮೆರೆದ ನವೀನ್ ಸುವರ್ಣ ಸಜಿಪ, ನವೀನ್ ಅಮೀನ್ ಶಂಕರಪುರ ಮತ್ತು ಯಕ್ಷಪ್ರಸಂಗ ಕತೃ ನಿತಿನ್ ಪೂಜಾರಿ ತೆಂಕಕಾರಂದೂರು ಹಾಗೂ ಮೇಳದ ಹಿಮ್ಮೇಳ, ಮುಮ್ಮೇಳದ ಎಲ್ಲಾ ಕಲಾವಿದರನ್ನು ಸನ್ಮಾನಿಸಲಾಯಿತು. ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆಯ 150 ರ ಪ್ರದರ್ಶನವನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಎಂ. ಪಿ. ದಿನೇಶ್, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಮಂಗಳೂರು ನಗರ ಸಮಿತಿಯ ಪ್ರಧಾನ ಸಂಚಾಲಕರಾದ ಹರೀಶ್ ಕೆ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ರಾಜೇಶ್, ಮಂಗಳೂರು ಘಟಕದ ಅಧ್ಯಕ್ಷ ಗಣೇಶ್ ಸುವರ್ಣ, ಕಂಕನಾಡಿ ಘಟಕದ ಅಧ್ಯಕ್ಷ ಪ್ರಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!