ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಕೊಕ್ಕಡ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಮತ್ತು ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಕೊಕ್ಕಡದಲ್ಲಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಕಾರ್ಯಕರ್ತರ ಸಂಭ್ರಮೋತ್ಸವವು ಮೇ 21 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಬಡವರಿಗೆ 5 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದನ್ನು ಆದಷ್ಟೂ ಬೇಗನೆ ಕಾರ್ಯರೂಪಕ್ಕೆ ಬರಲಿದೆ. ನಮ್ಮ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಸದಾ ಸಹಕಾರ ನೀಡುವುದಾಗಿ ಹೇಳಿದರು. ಅಲ್ಲದೆ ಚುನಾವಣಾ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.


ಬಳಿಕ ಕೊಕ್ಕಡದ ಜೋಡುಮಾರ್ಗದಿಂದ ಕೊಕ್ಕಡ ಪೇಟೆಯವರೆಗೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಸಂತ ಬಂಗೇರ ಮೆರವಣಿಗೆಯಲ್ಲಿ ಸಾಗಿ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಭಾಗಿಯಾದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಹಿತಿಂಡಿಯನ್ನು ಹಂಚಿ, ಪಟಾಕಿಯನ್ನು ಹಚ್ಚಿ ಕುಣಿದು ಕುಪ್ಪಳಿಸಿ, ಸಂಭ್ರಮ ಆಚರಿಸಿದರು.

Leave a Comment

error: Content is protected !!