25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

ಕೊಕ್ಕಡ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಮತ್ತು ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಕೊಕ್ಕಡದಲ್ಲಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಕಾರ್ಯಕರ್ತರ ಸಂಭ್ರಮೋತ್ಸವವು ಮೇ 21 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಬಡವರಿಗೆ 5 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದನ್ನು ಆದಷ್ಟೂ ಬೇಗನೆ ಕಾರ್ಯರೂಪಕ್ಕೆ ಬರಲಿದೆ. ನಮ್ಮ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಸದಾ ಸಹಕಾರ ನೀಡುವುದಾಗಿ ಹೇಳಿದರು. ಅಲ್ಲದೆ ಚುನಾವಣಾ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.


ಬಳಿಕ ಕೊಕ್ಕಡದ ಜೋಡುಮಾರ್ಗದಿಂದ ಕೊಕ್ಕಡ ಪೇಟೆಯವರೆಗೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಸಂತ ಬಂಗೇರ ಮೆರವಣಿಗೆಯಲ್ಲಿ ಸಾಗಿ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಭಾಗಿಯಾದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಹಿತಿಂಡಿಯನ್ನು ಹಂಚಿ, ಪಟಾಕಿಯನ್ನು ಹಚ್ಚಿ ಕುಣಿದು ಕುಪ್ಪಳಿಸಿ, ಸಂಭ್ರಮ ಆಚರಿಸಿದರು.

Related posts

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya
error: Content is protected !!