September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

ಕೊಕ್ಕಡ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಮತ್ತು ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಕೊಕ್ಕಡದಲ್ಲಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಕಾರ್ಯಕರ್ತರ ಸಂಭ್ರಮೋತ್ಸವವು ಮೇ 21 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಬಡವರಿಗೆ 5 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದನ್ನು ಆದಷ್ಟೂ ಬೇಗನೆ ಕಾರ್ಯರೂಪಕ್ಕೆ ಬರಲಿದೆ. ನಮ್ಮ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಸದಾ ಸಹಕಾರ ನೀಡುವುದಾಗಿ ಹೇಳಿದರು. ಅಲ್ಲದೆ ಚುನಾವಣಾ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.


ಬಳಿಕ ಕೊಕ್ಕಡದ ಜೋಡುಮಾರ್ಗದಿಂದ ಕೊಕ್ಕಡ ಪೇಟೆಯವರೆಗೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಸಂತ ಬಂಗೇರ ಮೆರವಣಿಗೆಯಲ್ಲಿ ಸಾಗಿ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಭಾಗಿಯಾದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಹಿತಿಂಡಿಯನ್ನು ಹಂಚಿ, ಪಟಾಕಿಯನ್ನು ಹಚ್ಚಿ ಕುಣಿದು ಕುಪ್ಪಳಿಸಿ, ಸಂಭ್ರಮ ಆಚರಿಸಿದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿ  ಪದ್ಮುಂಜ ಸಹಕಾರಿ ಸಂಘ: ಮಹಾಸಭೆಯಲ್ಲಿ ಶೇ. 12 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ  ರಕ್ಷಿತ್ ಪಣೆಕ್ಕರ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!