23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

ಕೊಕ್ಕಡ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಮತ್ತು ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಕೊಕ್ಕಡದಲ್ಲಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಕಾರ್ಯಕರ್ತರ ಸಂಭ್ರಮೋತ್ಸವವು ಮೇ 21 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಬಡವರಿಗೆ 5 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದನ್ನು ಆದಷ್ಟೂ ಬೇಗನೆ ಕಾರ್ಯರೂಪಕ್ಕೆ ಬರಲಿದೆ. ನಮ್ಮ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಸದಾ ಸಹಕಾರ ನೀಡುವುದಾಗಿ ಹೇಳಿದರು. ಅಲ್ಲದೆ ಚುನಾವಣಾ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.


ಬಳಿಕ ಕೊಕ್ಕಡದ ಜೋಡುಮಾರ್ಗದಿಂದ ಕೊಕ್ಕಡ ಪೇಟೆಯವರೆಗೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಸಂತ ಬಂಗೇರ ಮೆರವಣಿಗೆಯಲ್ಲಿ ಸಾಗಿ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಭಾಗಿಯಾದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಹಿತಿಂಡಿಯನ್ನು ಹಂಚಿ, ಪಟಾಕಿಯನ್ನು ಹಚ್ಚಿ ಕುಣಿದು ಕುಪ್ಪಳಿಸಿ, ಸಂಭ್ರಮ ಆಚರಿಸಿದರು.

Related posts

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya
error: Content is protected !!