22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

ಕೊಕ್ಕಡ: ಕೊಕ್ಕಡ ಗ್ರಾಮದ ಕೊಲ್ಲಾಜೆ ಮನೆಯ ನಿವೃತ್ತ ಅಧ್ಯಾಪಕರಾದ ಶ್ರೀಮತಿ ಸುಂದರಿ ಹಾಗೂ ಕುಂ‌‌ಞಪ್ಪ ಗೌಡ ರವರು ಮನೆಯ ನವೀಕರಣ ಮಾಡಿದ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆಯು ಮೇ 21 ರಂದು ನೆರವೇರಿತು.

ಈ ಸಂದರ್ಭದಲ್ಲಿ ಪಟ್ಟೂರು ಶ್ರೀರಾಮ ಶಾಲೆಗೆ ರೂ. 10,000 “ವಿದ್ಯಾನಿಧಿ” ಸಮರ್ಪಣೆ ಮಾಡಿದರು . ಅದೇ ರೀತಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ “ಮಂಗಳ ನಿಧಿ”ಯಾಗಿ ರೂ.10,000 ಮತ್ತು ಸೌತಡ್ಕ ಸೇವಾಧಾಮದಲ್ಲಿರುವ ಬೆನ್ನುಹುರಿ ಮುರಿತಕ್ಕೊಳಗಾದವರಿಗೆ ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಆರ್ ಎಸ್ ಎಸ್ ನ ಉಜಿರೆ ತಾಲೂಕಿನ ಸಹ ಕಾರ್ಯವಾಹ ಪ್ರಜ್ವಲ್, ಆರ್ ಎಸ್ ಎಸ್ ನ ಉಜಿರೆ ತಾಲೂಕಿನ ಪ್ರಚಾರ ಪ್ರಮುಖ್ ಗಣೇಶ್ ಪಿತ್ತಿಲು, ಕೊಕ್ಕಡ ಮಂಡಲ ಪ್ರಮುಖ್ ಚಂದ್ರಶೇಖರ ಗಾನಗಿರಿ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪುರಂದರ ಕೆ ಕಡೀರ ಉಪಸ್ಥಿತರಿದ್ದರು.

Related posts

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya
error: Content is protected !!