September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

ಕೊಕ್ಕಡ: ಕೊಕ್ಕಡ ಗ್ರಾಮದ ಕೊಲ್ಲಾಜೆ ಮನೆಯ ನಿವೃತ್ತ ಅಧ್ಯಾಪಕರಾದ ಶ್ರೀಮತಿ ಸುಂದರಿ ಹಾಗೂ ಕುಂ‌‌ಞಪ್ಪ ಗೌಡ ರವರು ಮನೆಯ ನವೀಕರಣ ಮಾಡಿದ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆಯು ಮೇ 21 ರಂದು ನೆರವೇರಿತು.

ಈ ಸಂದರ್ಭದಲ್ಲಿ ಪಟ್ಟೂರು ಶ್ರೀರಾಮ ಶಾಲೆಗೆ ರೂ. 10,000 “ವಿದ್ಯಾನಿಧಿ” ಸಮರ್ಪಣೆ ಮಾಡಿದರು . ಅದೇ ರೀತಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ “ಮಂಗಳ ನಿಧಿ”ಯಾಗಿ ರೂ.10,000 ಮತ್ತು ಸೌತಡ್ಕ ಸೇವಾಧಾಮದಲ್ಲಿರುವ ಬೆನ್ನುಹುರಿ ಮುರಿತಕ್ಕೊಳಗಾದವರಿಗೆ ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಆರ್ ಎಸ್ ಎಸ್ ನ ಉಜಿರೆ ತಾಲೂಕಿನ ಸಹ ಕಾರ್ಯವಾಹ ಪ್ರಜ್ವಲ್, ಆರ್ ಎಸ್ ಎಸ್ ನ ಉಜಿರೆ ತಾಲೂಕಿನ ಪ್ರಚಾರ ಪ್ರಮುಖ್ ಗಣೇಶ್ ಪಿತ್ತಿಲು, ಕೊಕ್ಕಡ ಮಂಡಲ ಪ್ರಮುಖ್ ಚಂದ್ರಶೇಖರ ಗಾನಗಿರಿ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪುರಂದರ ಕೆ ಕಡೀರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya
error: Content is protected !!