25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಕರ್ನಾಟಕದಲ್ಲಿ 2012 ರಲ್ಲಿ ಇದ್ದ ಬಿಜೆಪಿ ಸರಕಾರ ಡಾ.ವಿ.ಎಸ್.ಆಚಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಕರಾವಳಿಯ ಮೂಲಗೇಣಿದಾರರಿಗೆ ಸಂಪೂರ್ಣ ಹಕ್ಕು ನೀಡುವ ಕುರಿತು ಕರ್ನಾಟಕ ಕಾಯ್ದೆ ಸಂಖ್ಯೆ 24/2012 ನ್ನು ರೂಪಿಸಿತ್ತು. ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿದಾರರಿಗೆ ಸಂಪೂರ್ಣ ಮಾಲಕತ್ವ ಪ್ರದಾನ ಮಾಡುವ ಅಧಿನಿಯಮ ಸಿಂಧುತ್ವವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ 11158/2013 ಮತ್ತು ಇತರ ಅರ್ಜಿಗಳನ್ನು ಹೈಕೋರ್ಟ್ ಗೆ ಮೂಲಿದಾರರು ಸಲ್ಲಿಸಿದ್ದರು .

ರಾಜ್ಯ ಸರಕಾರದ ಈ ಅಧಿನಿಯಮ ಮಾಡುವ ಅಧಿಕಾರವನ್ನು ಪ್ರಶ್ನಿಸಿ, ಮೂಲಿದಾರರು ತಮ್ಮ ಮೂಲಭೂತ ಹಕ್ಕುಗಳಿಗೆ ಇದು ವಿರುದ್ಧವಾಗಿದೆ ಎಂದು ಪ್ರತಿಪಾದನೆ ಮಾಡಿದರು. ಈ ರಿಟ್ ಅರ್ಜಿಗಳನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿ ಸರಕಾರಕ್ಕೆ ಈ ಕುರಿತು ಅಧಿನಿಯಮವನ್ನು ಮಾಡುವ ಅಧಿಕಾರವಿದೆ ಎಂದು ತೀರ್ಪು ನೀಡಿದೆ.

ಇದರಿಂದಾಗಿ ದಶಕಗಳಿಂದ ಸಂಪೂರ್ಣ ಹಕ್ಕಿಗಾಗಿ ಕಾಯುತ್ತಿರುವ ಕರಾವಳಿಯ ಸಾವಿರಾರು ಮೂಲಗೇಣಿದಾರರಿಗೆ ಅಧಿಕಾರ ಸಿಗುವ ದಿಕ್ಕಿನಲ್ಲಿ ದಾರಿ ಸುಗಮವಾಗಿದೆ. ಸರಕಾರ ತಕ್ಷಣವೇ ಕಾರ್ಯಪ್ರವೃತ್ತರಾಗಿ ಮುಂದಿನ ಮೊದಲ ಅಧಿವೇಶನದಲ್ಲಿಯೇ ಪರಿಹಾರಕ್ಕಾಗಿ ಜಾತಕಪಕ್ಷಿಯಂತೆ ಕಾಯುತ್ತಿರುವ ಮೂಲ ಗೇಣಿದಾರರಿಗೆ ನ್ಯಾಯ ನೀಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಮತ್ತು ಯಾವುದೇ ಕಾರಣಕ್ಕೆ ವಿಳಂಬನೀತಿ ಅನುಸರಿಸದೆ ತಕ್ಷಣ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ಆಗ್ರಹಿಸಿದ್ದಾರೆ.

Related posts

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya
error: Content is protected !!