25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಕರ್ನಾಟಕದಲ್ಲಿ 2012 ರಲ್ಲಿ ಇದ್ದ ಬಿಜೆಪಿ ಸರಕಾರ ಡಾ.ವಿ.ಎಸ್.ಆಚಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಕರಾವಳಿಯ ಮೂಲಗೇಣಿದಾರರಿಗೆ ಸಂಪೂರ್ಣ ಹಕ್ಕು ನೀಡುವ ಕುರಿತು ಕರ್ನಾಟಕ ಕಾಯ್ದೆ ಸಂಖ್ಯೆ 24/2012 ನ್ನು ರೂಪಿಸಿತ್ತು. ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿದಾರರಿಗೆ ಸಂಪೂರ್ಣ ಮಾಲಕತ್ವ ಪ್ರದಾನ ಮಾಡುವ ಅಧಿನಿಯಮ ಸಿಂಧುತ್ವವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ 11158/2013 ಮತ್ತು ಇತರ ಅರ್ಜಿಗಳನ್ನು ಹೈಕೋರ್ಟ್ ಗೆ ಮೂಲಿದಾರರು ಸಲ್ಲಿಸಿದ್ದರು .

ರಾಜ್ಯ ಸರಕಾರದ ಈ ಅಧಿನಿಯಮ ಮಾಡುವ ಅಧಿಕಾರವನ್ನು ಪ್ರಶ್ನಿಸಿ, ಮೂಲಿದಾರರು ತಮ್ಮ ಮೂಲಭೂತ ಹಕ್ಕುಗಳಿಗೆ ಇದು ವಿರುದ್ಧವಾಗಿದೆ ಎಂದು ಪ್ರತಿಪಾದನೆ ಮಾಡಿದರು. ಈ ರಿಟ್ ಅರ್ಜಿಗಳನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿ ಸರಕಾರಕ್ಕೆ ಈ ಕುರಿತು ಅಧಿನಿಯಮವನ್ನು ಮಾಡುವ ಅಧಿಕಾರವಿದೆ ಎಂದು ತೀರ್ಪು ನೀಡಿದೆ.

ಇದರಿಂದಾಗಿ ದಶಕಗಳಿಂದ ಸಂಪೂರ್ಣ ಹಕ್ಕಿಗಾಗಿ ಕಾಯುತ್ತಿರುವ ಕರಾವಳಿಯ ಸಾವಿರಾರು ಮೂಲಗೇಣಿದಾರರಿಗೆ ಅಧಿಕಾರ ಸಿಗುವ ದಿಕ್ಕಿನಲ್ಲಿ ದಾರಿ ಸುಗಮವಾಗಿದೆ. ಸರಕಾರ ತಕ್ಷಣವೇ ಕಾರ್ಯಪ್ರವೃತ್ತರಾಗಿ ಮುಂದಿನ ಮೊದಲ ಅಧಿವೇಶನದಲ್ಲಿಯೇ ಪರಿಹಾರಕ್ಕಾಗಿ ಜಾತಕಪಕ್ಷಿಯಂತೆ ಕಾಯುತ್ತಿರುವ ಮೂಲ ಗೇಣಿದಾರರಿಗೆ ನ್ಯಾಯ ನೀಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಮತ್ತು ಯಾವುದೇ ಕಾರಣಕ್ಕೆ ವಿಳಂಬನೀತಿ ಅನುಸರಿಸದೆ ತಕ್ಷಣ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!